ವಿವಾದಾತ್ಮಕ ಹೇಳಿಕೆ ವೈರಲ್ ಆಗುತ್ತಿದ್ದಂತೆ ಸಮಜಾಯಿಷಿ ನೀಡಿರುವ ಜೀವರಾಜ್, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ, "ಗೌರಿ ಲಂಕೇಶ್ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಗೌರಿ ಲಂಕೇಶ್ ಮತ್ತು ಸಿದ್ದರಾಮಯ್ಯ ಆಪ್ತರಾಗಿದ್ದರು. ಕಲಬುರ್ಗಿ ಹಂತಕರನ್ನು ಬಂಧಿಸಿದ್ದರೆ ಈ ಅಪರಾಧ ತಡೆಯಬಹುದಾಗಿತ್ತು," ಎಂದು ಹೇಳಿದ್ದಾರೆ.