ಶುಕ್ರವಾರ ಮಂಡ್ಯದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ತಾವು ವಿದ್ಯಾರ್ಥಿಯಾಗಿದ್ದಾಗ ಮಂಡ್ಯ ಜಿಲ್ಲೆಯೊಂದಿಗಿನ ತಮ್ಮ ಭಾವನಾತ್ಮಕ ಸಂಬಂಧದ ಬಗ್ಗೆ ಹಂಚಿಕೊಂಡರು. ನಾನು ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ನಡುವೆ ಯಾವತ್ತೂ ತಾರತಮ್ಯ ಮಾಡಿಲ್ಲ, ಮೈಸೂರು ಮತ್ತು ಮಂಡ್ಯ ಎರಡು ನನ್ನ ಹೃದಯಕ್ಕೆ ಹತ್ತಿರ. ಮಂಡ್ಯದ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ವಿಶ್ವಾಸವಿದೆ, ಹೀಗಾಗಿ ನಾನು ಹಣಕಾಸು ಸಚಿವನಾಗಿದ್ದಾಗ ಉತ್ತಮ ಕೆಲಸಗಳನ್ನು ಮಾಡಿದ್ದೇನೆ ಎಂದು ನೆನಪಿಸಿಕೊಂಡರು.