ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ವಿರೋಧ ವ್ಯಕ್ತ ಪಡಿಸಿದ ಅವರು, ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೆ. ಬೇಗನೆ ಹಂತಕರನ್ನು ಪತ್ತೆ ಮಾಡಲಿ. ಸಂಘಪರಿವಾರದ ಮೇಲೆ ಗೂಬೆ ಕೂರಿಸುವ ಕೆಲಸ ಏಕೆ ಮಾಡಬೇಕು ಎಂದು ತರಾಟೆಗೆ ತೆಗೆದುಕೊಂಡರು. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಕೊಲೆ ಆದ ದಿನವೇ ರಾಹುಲ್ಗಾಂಧಿ ಬಿಜೆಪಿ ಮತ್ತು ಆರ್ಎಸ್ಎಸ್ಗೆ ಸಂಬಂಧ ಕಲ್ಪಿಸುವ ಮೂಲಕ ಹುಡುಗಾಟದ ಹೇಳಿಕೆ ನೀಡಿದ್ದರು.