ಲಿಂಗಾಯತ- ವೀರಶೈವ ಪ್ರತ್ಯೇಕ ಧರ್ಮದ ಹೋರಾಟಕ್ಕೆ ಕಾಂಗ್ರೆಸ್ ಮುಖಂಡರು ಬೆಂಬಲ ನೀಡುತ್ತಿರುವ ಹಿನ್ನೆಲೆಯಲ್ಲಿ, ಬಿಜೆಪಿ ತನ್ನ ವೋಟ್ ಬ್ಯಾಂಕ್ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ. ಹೀಗಾಗಿ ಬಿಜೆಪಿ ಉತ್ತರ ಕರ್ನಾಟಕದತ್ತ ತನ್ನ ಗಮನ ಕೇಂದ್ರಿಕರಿಸುತ್ತಿದೆ. ಸಮುದಾಯದ ನಡುವೆ ನಡೆಯುತ್ತಿರುವ ಜಗಳದಲ್ಲಿ ಬಿಜೆಪಿ ಮೂಗು ತೂರಿಸದೇ ಮೌನವಾಗಿದೆ. ಪಕ್ಷದ ಸಾಂಪ್ರಾದಾಯಿಕ ಭದ್ರಕೋಟೆ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಬಹುಮತ ಪಡೆಯದಿದ್ದರೇ ಮಿಷನ್-150 ಸಾಧ್ಯವಿಲ್ಲ ಎಂದು ಅಮಿತ್ ಶಾ ಸಂದೇಶ ರವಾನಿಸಿದ್ದಾರೆ, ಯಡಿಯೂರಪ್ಪ ಅವರು ಉತ್ತರ ಕರ್ನಾಟಕದಿಂದ ಸ್ಪರ್ಧಿಸಿದರೇ ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಸೂಚಿಸಿದ್ದಾರೆ.