ಕಲಬುರಗಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಕ್ಷೇತ್ರವೊಂದನ್ನು ಆಯ್ಕೆ ಮಾಡಿಕೊಳ್ಳಲು ಪಕ್ಷದ ನಾಯಕರು ಸೂಚಿಸಿದ್ದಾರೆ. ತಾವು ಶಿಕಾರಿಪುರ ಕ್ಷೇತ್ರದಿಂದ ಹಲವು ವರ್ಷಗಳಿಂದ ಸ್ಪರ್ಧಿಸುತ್ತಾ ಬಂದಿದ್ದು ಈ ಬಾರಿ ಉತ್ತರ ಕರ್ನಾಟಕ ಭಾಗದಿಂದ ಸ್ಪರ್ಧಿಸಲು ತಮಗೂ ಇಚ್ಛೆಯಿದೆ ಎಂದು ಹೇಳಿದರು. ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಿರಾ ಎಂದು ಸುದ್ದಿಗಾರರು ಕೇಳಿದಾಗ, ಆ ಬಗ್ಗೆ ಇನ್ನೂ ಯೋಚಿಸಿಲ್ಲ. ಆದರೆ ಬಾಗಲಕೋಟೆ ಅಥವಾ ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವುದಾಗಿ ಹೇಳಿದ್ದಾರೆ.