ಶಿಕಾರಿಪುರ ಕ್ಷೇತ್ರ ಬಿಟ್ಟು ಉತ್ತರ ಕರ್ನಾಟಕದಿಂದ ಯಡಿಯೂರಪ್ಪ ಸ್ಪರ್ಧಿಸಲಿದ್ದಾರೆ ಎಂಬ ವಿಷಯ ಪಕ್ಷದಲ್ಲಿ ದೊಡ್ಡ ಕುತೂಹಲ ಮೂಡಿಸಿದೆ. ಜಗದೀಶ್ ಶೆಟ್ಟರ್, ಆರ್. ಅಶೋಕ, ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ ಅವರಂತ ಪ್ರಮುಖ ನಾಯಕರನ್ನು ತಮ್ಮ ಕ್ಷೇತ್ರಗಳನ್ನು ಬಿಟ್ಟು ಜಯಗಳಿಸಲು ಕಷ್ಟಸಾಧ್ಯವಾಗಿರುವಂತ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಸೂಚಿಸಲು ಅಮಿತ್ ಶಾ ತಂತ್ರಗಾರಿಕೆ ರೂಪಿಸಿದ್ದಾರೆ.