ಬಿಎಸ್ ವೈ, ರವಿಶಂಕರ್ ಪ್ರಸಾದ್, ಶೋಭಾ ವಿರುದ್ಧ ಕಾಂಗ್ರೆಸ್ ಕಾರ್ಪೊರೇಟರ್ ನಿಂದ ಮಾನನಷ್ಟ ಮೊಕದ್ದಮೆ?

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ನಿರ್ಧರಿಸಿದ್ದಾರೆ.
ಕಾಂಗ್ರೆಸ್
ಕಾಂಗ್ರೆಸ್
Updated on
ಮಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಕಾಂಗ್ರೆಸ್ ನ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ನಿರ್ಧರಿಸಿದ್ದಾರೆ. 
ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ಇತ್ತೀಚೆಗಷ್ಟೇ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ ಮಾಡಿತ್ತು. ಈ ಚಾರ್ಜ್ ಶೀಟ್ ಪುಸ್ತಕದಲ್ಲಿ ಬಿಜೆಪಿ ತಮ್ಮ ಭಾವಚಿತ್ರವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರಭಾ ಕುಳಾಯಿ ಆರೋಪ ಮಾಡಿದ್ದಾರೆ. 
ಈ ಸಂಬಂಧ ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕುಳಾಯಿ ದೂರು ದಾಖಲಿಸಿದ್ದಾರೆ. ಆದರೆ ಇದು  ಕೋರ್ಟ್ ಮೊರೆ ಹೋಗಲು ಪೊಲೀಸರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಾ ಕುಳಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾಗಿದ್ದಾರೆ. 
ಈ ಬಗ್ಗೆ ವರದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಈ ವರೆಗೂ ಕ್ಷಮೆ ಕೋರಿಲ್ಲ, ಒಂದು ವೇಳೆ ಈಗ ಕ್ಷಮೆ ಕೋರಿದರೂ ಸಹ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com