ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ, ದೂರು ದಾಖಲು

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮನೆ ಎದುರು ದುಷ್ಕರ್ಮಿಗಳು ವಾಮಾಚಾರ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಸಂಗ ನಡೆದಿದೆ.
ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ,  ದೂರು ದಾಖಲು
ತುಮಕೂರು: ಜೆಡಿಎಸ್ ಅಭ್ಯರ್ಥಿಗೆ ಕೊಲೆ ಬೆದರಿಕೆ, ದೂರು ದಾಖಲು
Updated on
ತುಮಕೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಮನೆ ಎದುರು ದುಷ್ಕರ್ಮಿಗಳು ವಾಮಾಚಾರ ನಡೆಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಸಂಗ ನಡೆದಿದೆ. 
ಚುನಾವಣೆ ಕಣದಿಂಡ ತಮ್ಮ ಎದುರಾಳಿ ಅಭ್ಯರ್ಥಿಯನ್ನು ದೂರ ಮಾಡಲು ಈ ಕೃತ್ಯ ಎಸಗಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ, ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್ ಆರೋಪಿಸಿದ್ದಾರೆ.
ವಾಮಾಚಾರ ನಡೆಸಿರುವ ದುಷ್ಕರ್ಮಿಗಳು ಗೌರಿಶಂಕರ್ ಅವರ ಬೆಂಗಳೂರಿನ ನಾಗರಬಾವಿಯಲ್ಲಿರುವ ಮಎಯ ಎದುರಿಗೆ ಒಂದು ಅಡಕೆ ತಟ್ಟೆಯಲ್ಲಿ ಕುಂಕುಮ ಮಿಶ್ರಿತ ಅನ್ನ ಇಟ್ಟು ಅದರಲ್ಲಿ ಬೆದರಿಕೆ ಪತ್ರ ಹಾಗೂ ಒಂದು ಚಾಕು ಇರಿಸಿದ್ದಾರೆ.
"ನೀನು ಚುನಾವಣೆಗೆ ನಾಮಪತ್ರ ಸಲ್ಲಿಸಬಾರದು, ಸಲ್ಲಿಸಿದ್ದಾದರೆ ನಿನ್ನ ಹೆಂಡತಿ, ಮಕ್ಕಳನ್ನು ಸುಮ್ಮನೆ ಬಿಡುವುದಿಲ್ಲ. ನಿನ್ನನ್ನು ಬೀದಿಯಲ್ಲಿ ಭಿಕ್ಷೆ ಎತ್ತುವಂತೆ ಮಾಡುತ್ತೇವೆ" ಪತ್ರದಲ್ಲಿ ಬರೆಯಲಾಗಿದೆ.
ಮಾಜಿ ಸಚಿವ ಚೆನ್ನಿಗಪ್ಪ ಅವರ ಪುತ್ರ ಗೌರಿಶಂಕರ್​ ಅವರಿಗೆ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಟಿಕೆಟ್ ಖಚಿತಗೊಂಡಿದೆ. ಇದೇ ಕಾರಣದಿಂದ ಅವರನ್ನು ಬೆದರಿಸಲಿಕ್ಕಾಗಿ ಎದುರಾಳಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.
ಪ್ರಸ್ತುತ ಗೌರಿಶಂಕರ್ ಪ್ರಕರಣದ ಬಗೆಗೆ ಬೆಂಗಳೂರಿನ ವಿಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸ್ದಾರೆ. ದೂರಿನಲ್ಲಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಅವರ ಕುರಿತಂತೆ ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com