ಸಂಸತ್ ಕಲಾಪ ಬಲಿಯಾಗಲು ಕಾಂಗ್ರೆಸ್ ಕಾರಣ ಎಂಬ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ನೀರವ್ ಮೋದಿ ಪಿಎನ್ ಬಿಗೆ ವಂಚಿಸಿದ ಪ್ರಕರಣ ಮತ್ತು ರಾಫೆಲ್ ಡೀಲ್ ಬಗ್ಗೆ ಚರ್ಚೆಯಾಗಬೇಕು ಎಂದು ನಾವು ಒತ್ತಾಯಿಸಿದ್ದೇವೆ. ಆದರೆ ಹಗರಣಗಳ ಬಗ್ಗೆ ಚರ್ಚೆ ಮಾಡಲು ಬಯಸದ ಮೋದಿ ಸರ್ಕಾರ, ಸಂಸತ್ ಕಲಾಪ ಬಲಿ ಪಡೆದಿದೆ ಎಂದು ಆರೋಪಿಸಿದರು.