ದೇವೇಗೌಡರು, ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಿದ್ದವರು, ಆಗ ಸಾಲ ಮನ್ನಾ ಮಾಡದವರು ಈಗೇಕೆ ಅದರ ಬಗ್ಗೆ ಮಾತನಾಡುತ್ತಿದ್ದಾರೆ? ಎಂಬುದು ನಿಮ್ಮ ಇನ್ನೊಂದು ಪ್ರಶ್ನೆ, ಸ್ವಾಮಿ ಸಿದ್ದಾರಾಮಯ್ಯನವರೇ, ದೇವೇಗೌಡರು ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಹಣಕಾಸು ಸಚಿವರಾಗಿದ್ದ ಮಹಾನುಭಾವರಾದರೂ ಯಾರು? ತಾವೇ ಅಲ್ಲವೇ? ಹಣಕಾಸು ಸಚಿವರಾಗಿ, ಸಾಲ ಮನ್ನಾ ಮಾಡಬಹುದಾದ ಅವಕಾಶವಿದ್ದೂ, ಮಂತ್ರಿ ಮಂಡಲದ ಹಿರಿಯರಾಗಿ ತಾವೇಕೆ ದೇವೇಗೌಡರಿಗೆ ಸಾಲಮನ್ನಾದ ಕುರಿತು ಪ್ರಸ್ತಾವನೆ ಕೊಡಲಿಲ್ಲ? ಸಲಹೆ ನೀಡಲಿಲ್ಲ.