ಐಟಿ ಇಲಾಖೆ ಮುಖ್ಯಸ್ಥರಿಂದ ಬಿಜೆಪಿ ಪರ ಪ್ರಚಾರ: ಸಾರಿಗೆ ಸಚಿವ ಎಚ್.ಎಂ ರೇವಣ್ಣ

: ಆದಾಯ ತೆರಿಗೆ ಇಲಾಖೆ ನಿರ್ದೇಶಕರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಬಿಜೆಪಿ ಪರ ಕ್ಯಾನ್ವಾಸ್ ಮಾಡುತ್ತಿದ್ದಾರೆ...
ಎಚ್.ಎಂ ರೇವಣ್ಣ
ಎಚ್.ಎಂ ರೇವಣ್ಣ
Updated on
ಬೆಂಗಳೂರು: ಆದಾಯ ತೆರಿಗೆ ಇಲಾಖೆ ನಿರ್ದೇಶಕರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು  ಬಿಜೆಪಿ ಪರ ಕ್ಯಾನ್ವಾಸ್ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ಎಚ್.ಎಂ ರೇವಣ್ಣ ಆರೋಪಿಸಿದ್ದಾರೆ.
ಕರ್ನಾಟಕ ಸರ್ಕಾರ ಈ ವರ್ಷದ ಜನವರಿಯಿಂದ ಮಾರ್ಚ್ ವರೆಗೆ ಗುತ್ತಿಗೆದಾರರಿಗೆ ನೀಡಿದ ದೊಡ್ಡ ಮಟ್ಟದಲ್ಲಿ ಹಣ ಪಾವತಿ ಮಾಡಿರುವುದರ ಬಗ್ಗೆ ಐಟಿ ಇಲಾಖೆ ಮಾಹಿತಿ ಕೋರಿದ್ದರ ಹಿನ್ನೆಲೆಯಲ್ಲಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಸೇರಬೇಕು ಇಲ್ಲವಾದರೇ ಕೋರ್ಟ್ ಗೆ ಎಳೆಯುವುದಾಗಿ ಐಟಿ ಇಲಾಖೆ ನಿರ್ದೇಶಕರು ನಮ್ಮ ನಾಯಕರುಗಳಿಗೆ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ನಾವು ಈಗಾಗಲೇ ದೂರು ನೀಡಿದ್ದೇವೆ, ಐಟಿ ಇಲಾಖೆ ಕೇವಲ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಈ ಮೊದಲು ನಡೆದಿರುವ ಕೆಲಸಗಳ ಬಗ್ಗೆ ಐಟಿ ಇಲಾಖೆ ಪ್ರಶ್ನೆ ಎತ್ತಿಲ್ಲ ಎಂದು ದೂರಿರುವ ಅವರು, ಆದಾಯ ತೆರಿಗೆ ಇಲಾಖೆ ನಿರ್ದೇಶಕ ಬಿಆರ್ ಬಾಲಕೃಷ್ಣನ್ ಏಪ್ರಿಲ್ 6 2018 ರಂದು ಪಶು ಸಂಗೋಪನಾ ಇಲಾಖೆ, ಕಂದಾಯ ಮತ್ತು ಇಂಧನ ಹಾಗೂ ಲೋಕೋಪಯೋಗಿ ಇಲಾಖೆಗಳ ಗುತ್ತಿಗೆದಾರರಿಗೆ ಹಣ ಪಾವತಿಸಿರುವ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದರು ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com