ಚಿತ್ತಾಪುರ ಶಾಸಕ ಪ್ರಿಯಾಂಕ್ ಹಿರಿಯ ನಾಯಕರಿಗೆ ಗೌರವ ನೀಡುತ್ತಿಲ್ಲ, ಕಳೆದ ಮೂರು ವರ್ಷಗಳಲ್ಲಿ ಕ್ಷೇತ್ರದಲ್ಲಿ ಜಾತಿವಾದ ತಾಂಡವವಾಡುತ್ತಿದೆ, ಹೀಗಾಗಿ ಜನ ತಮ್ಮ ನಿಷ್ಠೆಯನ್ನು ಬಿಜೆಪಿಗೆ ಬದಲಾಯಿಸಿದ್ದಾರೆ ಎಂದು ಲಿಂಗಾರೆಡ್ಡಿ ತಿಳಿಸಿದ್ದಾರೆ. ಮೊದಲು ಕಾಂಗ್ರೆಸ್ ನಲ್ಲಿದ್ದ ಸೋಮಶೇಖರ್ ಪಾಟೀಲ್, ಹಿರಿಯ ನಾಯಕ ರವಿಂದ್ರ ಸಜ್ಜನಶೆಟ್ಟಿ ಅವರಿಗೆ ನಿಗಮ-ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಹೇಳಿದ್ದರು, ಆದರೆ ಪ್ರಿಯಾಂಕ್ ತಾವು ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿಲ್ಲ, ಪ್ರಿಯಾಂಕ್ ಹೇಗೆ ಹಿರಿಯರನ್ನು ನಿರ್ಲಕ್ಷ್ಸಿಸುತ್ತಾರೆ ಎಂಬುದು ಇದರಿಂದ ತಿಳಿದು ಬರುತ್ತಿದೆ ಎಂದು ಹೇಳಿದ್ದಾರೆ,