ಧಾರ್ಮಿಕ ಕಾರ್ಯನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಆಂಧ್ರ ಉಪ ಮುಖ್ಯಮಂತ್ರಿ ಕೆ.ಇ.ಕೃಷ್ಣಮೂರ್ತಿ ಯವರು ಮೋದಿ ವಿರುದ್ಧ ಮಾತನಾಡಿ, ಮೋದಿ ಪಕ್ಷವಾದ ಬಿಜೆಪಿಗೆ ಮತ ನೀಡಬೇಡಿ ಎಂದು ಕರ್ನಾಟಕದಲ್ಲಿ ನೆಲೆಸಿರುವ ತೆಲುಗು ಪ್ರಜೆಗಳಿಗೆ ಕರೆ ನೀಡಿದ್ದಾರೆ. 'ಪ್ರಧಾನಿ ನರೇಂದ್ರ ಮೋದಿ ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ನಿರ್ಮಾಣ ಫಂಡ್, ಕಡಪ ಸ್ಟೀಲ್ ಬ್ರಿಡ್ಜ್, ವೈಜಾಕ್ ರೈಲ್ವೇ ಜೋನ್ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ನೆರವೇರಿಸುವುದಾಗಿ ತಿರುಪತಿ ತಿಮ್ಮಪ್ಪನ ಸನ್ನಿದಾನದಲ್ಲಿ ತಿಳಿಸಿದ್ದರು. ಆದರೆ ಅವರು ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ' ಎಂದು ವಾಗ್ದಾಳಿ ನಡೆಸಿದರು.