ಮತಯಾಚನೆಗೆ ಬಂದ ಅಭ್ಯರ್ಥಿಗೆ 500 ರು. ನೀಡಿದ ಮತದಾರ!

ಮೇ 12ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಅಂಕೋಲಾ: ಮೇ 12ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಇನ್ನು ಮತದಾರರಿಗೆ ಅಭ್ಯರ್ಥಿಗಳು ಹಣದ ಆಮಿಷವೊಡ್ಡುವುದು ಸಾಮಾನ್ಯ ಆದರೆ ಅಂಕೋಲದಲ್ಲಿ ಮತಯಾಚನೆಗೆ ಬಂದ ಅಭ್ಯರ್ಥಿಗೆ ಮತದಾರರೊಬ್ಬರು 500 ರುಪಾಯಿ ನೀಡಿ ಗಮನ ಸೆಳೆದಿದ್ದಾರೆ. 
ಅಂಕೋಲಾದ ಲಕ್ಷ್ಮೀಶ್ವರ ನಗರ ನಿವಾಸಿ ಪ್ರಕಾಶ್ ನಾಯ್ಕ್ ಎಂಬುವರು ಮನೆಗೆ ಮತ ಕೇಳಲು ಬಂದ ಮಾಜಿ ಸಚಿವ ಕಾರವಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಅವರಿಗೆ 500 ರುಪಾಯಿ ನೀಡಿ ನಿಮಗೆ ಮತ ಹಾಕುತ್ತೇನೆ ಎಂದು ಹೇಳಿದ್ದಾರೆ. 
ಚುನಾವಣೆಗಳು ಬಂದಾಗ ರಾಜಕಾರಣಿಗಳು ಜನರಿಗೆ ಹಣ ನೀಡುತ್ತಾರೆ ಆ ಪ್ರಕ್ರಿಯೆ ನಿಲ್ಲಬೇಕು ಹೀಗಾಗಿ ನಾನು ಅಭ್ಯರ್ಥಿಗೆ ನಾನು ದುಡಿದ ಹಣ ನೀಡಿದ್ದೇನೆ ಎಂದು ಹೇಳಿದ್ದಾರೆ. 
ಕಾರವಾರದಲ್ಲಿ ಈ ಬಾರಿ ಬಿಜೆಪಿಯಿಂದ ರೂಪಾಲಿ ನಾಯ್ಕ್, ಕಾಂಗ್ರೆಸ್ ನಿಂದ ಹಾಲಿ ಶಾಸಕ ಸತೀಶ್ ಸೈಲ್ ಮತ್ತು ಆನಂದ್ ಅಸ್ನೋಟಿಕರ್ ಸ್ಪರ್ಧಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com