ಪಕ್ಷದ ಟಿಕೆಟ್ ಹಂಚಿಕೆಯಿಂದ ವಿಆರ್ ಸುದರ್ಶನ್ ಅವರು ತೀವ್ರ ಅಸಮಾಧಾನಗೊಂಡಿದ್ದು, ಇದೇ ಕಾರಣಕ್ಕಾಗಿ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ವಿಆರ್ ಸುದರ್ಶನ್ ಅವರು ಕೋಲಾರ ಕ್ಷೇತ್ರ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಂತಿಮ ಹಂತದಲ್ಲಿ ಪಕ್ಷ ಮತ್ತೊಬ್ಬರಿಗೆ ಟಿಕೆಟ್ ನೀಡಿದೆ ಎಂದು ಆರೋಪಿಸಿ ಸುದರ್ಶನ್ ರಾಜಿನಾಮೆ ನೀಡಿದ್ದಾರೆ ಎನ್ನಲಾಗಿದೆ.