ಇಂದು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ 16 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ. ಬ್ಯಾಡಗಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಣ್ಣ, ತರೀಕೆರೆ ಕ್ಷೇತ್ರದ ಶ್ರೀನಿವಾಸ್, ಬಿಜಾಪುರ ಕ್ಷೇತ್ರದ ಮಕಬುಲ್ ಭಗವಾನ್, ನಾಗಠಾಣ ಕ್ಷೇತ್ರದ ರಾಜು ಅಲಗೂರು, ಬಾದಾಮಿ ಕ್ಷೇತ್ರ ಚಿಮ್ಮನಕಟ್ಟಿ, ಕೊಳ್ಳೆಗಾಲ ಕ್ಷೇತ್ರದ ಜಯಣ್ಣ, ಕಲಬುರಗಿ ಕ್ಷೇತ್ರದ ರಾಮಕೃಷ್ಣ ಅವರಿಗೆ ಟಿಕೆಟ್ ನೀಡಲಾಗಿಲ್ಲ ಎಂದು ತಿಳಿದುಬಂದಿದೆ.