ಶಾಂತಿನಗರ ಸೇರಿ 5 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದ ಕಾಂಗ್ರೆಸ್

ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ನಿರೀಕ್ಷೆಯಂತೆಯೇ ಕಾಂಗ್ರೆಸ್ ಪಕ್ಷ ಬಹುತೇಕ ಎಲ್ಲ ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆಯಾದರೂ, ಬೆಂಗಳೂರಿನ ಶಾಂತಿನಗರ ಸೇರಿದಂತೆ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಘೋಷಣೆ ಮಾಡಿಲ್ಲ.
ಈ ಹಿಂದೆ ಘೋಷಣೆ ಮಾಡಿದಂತೆಯೇ ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಈ ಹಿಂದೆ ನಿಧನರಾದ ಈ ಕ್ಷೇತ್ರದ ಶಾಸಕ ಹಾಗೂ ಹಿರಿಯ ರೈತ ಮುಖಂಡ ಕೆಎಸ್ ಪುಟ್ಟಣ್ಣಯ್ಯ ಅವರಿಗಾಗಿ ಅವರ ಚುನಾವಣೆಗೆ ನಿಂತಿರುವ ಅವರ ಪುತ್ರ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಬೆಂಬಲಿಸಲು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ.
ಇದನ್ನು ಹೊರತು ಪಡಿಸಿದರೆ ಬೆಂಗಳೂರಿನ ಶಾಂತಿನಗರ ಸೇರಿದಂತೆ ನಾಗಥಾಣಾ,   ರಾಯಚೂರು, ಸಿಂಧಗಿ ಮತ್ತು ಕಿತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. 
ನಲಪಾಡ್ ಪ್ರಕರಣದಿಂದ ಶಾಂತಿನಗರದಲ್ಲಿ ಹಾಲಿ ಶಾಸಕ ಮತ್ತು ನಲಪಾಡ್ ತಂದೆ ಎನ್ ಎ ಹ್ಯಾರಿಸ್ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಅಲ್ಲದೆ ಈ ಪ್ರಕರಣ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ತೀವ್ರ ಮುಜುಗರವನ್ನುಂಟು ಮಾಡಿದ್ದು, ಇದೇ ಕಾರಣಕ್ಕೆ ಶಾಂತಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಇನ್ನು ಮೇಲುಕೋಟೆಯಲ್ಲಿ ಈ ಹಿಂದೆ ಹೇಳಿದಂತೆ ಪುಟ್ಟಣ್ಣಯ್ಯ ಅವರಿಗಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com