ನಲಪಾಡ್ ಪ್ರಕರಣದಿಂದ ಶಾಂತಿನಗರದಲ್ಲಿ ಹಾಲಿ ಶಾಸಕ ಮತ್ತು ನಲಪಾಡ್ ತಂದೆ ಎನ್ ಎ ಹ್ಯಾರಿಸ್ ತೀವ್ರ ಮುಜುಗರಕ್ಕೀಡಾಗಿದ್ದಾರೆ. ಅಲ್ಲದೆ ಈ ಪ್ರಕರಣ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೂ ತೀವ್ರ ಮುಜುಗರವನ್ನುಂಟು ಮಾಡಿದ್ದು, ಇದೇ ಕಾರಣಕ್ಕೆ ಶಾಂತಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ ಎನ್ನಲಾಗಿದೆ. ಇನ್ನು ಮೇಲುಕೋಟೆಯಲ್ಲಿ ಈ ಹಿಂದೆ ಹೇಳಿದಂತೆ ಪುಟ್ಟಣ್ಣಯ್ಯ ಅವರಿಗಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿತ್ತು.