ಈ ಕುರಿತು ಫೇಸ್ ಬುಕ್ ಖಾತೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಅವರು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ದಿನೇಶ್ ಅವರು ನೀಡಿರುವ ಹೇಳಿಕೆ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ತಮ್ಮನ್ನು ಮಧ್ಯೆ ಎಳೆದು ತಂದಿರುವುದು ತಪ್ಪು. ದಿನೇಶ್ ಅವರ ಹೇಳಿಕೆ ಸಂಬಂಧ ಅವರು ಏನು ಬೇಕಾದರೂ ಹೇಳಲಿ. ಆದರೆ, ಮಾತಿನ ಭರದಲ್ಲಿ ನನ್ನನ್ನು ಎಳೆ ತರುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನೆ ಮಾಡಿದ್ದಾರೆ.