ಸಿದ್ದರಾಮಯ್ಯ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಒತ್ತಾಯ ಹೇರುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ, ಆರ್ ವಿ ದೇಶಪಾಂಡೆ. ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಹಿರಿಯ ನಾಯಕರು ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗ ಸಚಿವರಾದ ಎಂಬಿ ಪಾಟೀಲ್ ಮತ್ತು ಕೆಜೆ ಜಾರ್ಜ್ ಅವರ ಮಾತು ಕೇಳುತ್ತಿದ್ದಾರೆ. ಸಿಎಂ ಅನಗತ್ಯವಾಗಿ ಜೆಡಿಎಸ್ ಪಕ್ಷವನ್ನು ಟೀಕಿಸುತ್ತಿರುವುದೇಕೆ ಎಂದು ಪ್ರಶ್ನೆ ಮಾಡಿದ್ದರು.