ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಮೇ 12 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ, ಅವರ ಸಹೋದರ ಎಚ್.ಡಿ ರೇವಣ್ಣ ಹೊಳೆ ನರಸಿಪುರದಿಂದ ಸ್ಪರ್ಧಿಸುತ್ತಿದ್ದು ತವರು ಜಿಲ್ಲೆ ಹಾಸನದಲ್ಲಿ ರಣತಂತ್ರ ರೂಪಿಸುತ್ತಿದ್ದಾರೆ, ಈ ನಡುವೆ ಅವರ ಮತ್ತೊಬ್ಬ ಸಹೋದರ ರಮೇಶ್ ಗೌಡ ಕೋಲಾರದಲ್ಲಿ ಸದ್ದಿಲ್ಲದೇ ಪಕ್ಷದ ಪರ ಕೆಲಸ ಮಾಡುತ್ತಿದ್ದಾರೆ.