ಹಲವೆಡೆ ಭಿನ್ನಮತ ಸ್ಫೋಟಗೊಂಡಿದ್ದು, ಶಾಸಕ ಷಡಕ್ಷರಿ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ತಿಪಟೂರ್ ಬಂದ್ ನಡೆಸಲಾಗಿದೆ. ಇದೇ ವೇಳೆ ಮುಧೋಳ, ಬಾಗಲಕೋಟೆ, ಚಿಕ್ಕಮಗಳೂರು, ಸಿರಗುಪ್ಪ, ಲಿಂಗಸ್ಗೂರು, ಕಡೂರು ಸೇರಿದಂತೆ ಹಲವೆಡೆ ಟಿಕೆಟ್ ವಂಚಿತರ ಬೆಂಬಲಿಗರು ಬೀದಿಗಳಿದು ಪ್ರತಿಭಟನೆ ನಡೆಸಿ ಹೈಕಮಾಂಡ್ ವಿರುದ್ಧ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.