ಸಿದ್ದರಾಮಯ್ಯ
ರಾಜಕೀಯ
ಕಾರ್ಪೊರೇಟ್ ಗಳಿಗೆ ನೀಡುವ ನೆರವು ರೈತರಿಗೇಕೆ ಇಲ್ಲ: ಮೋದಿ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ
ರೈತರ ಸಾಲ ಮನ್ನಾ ವಿಷಯದಲ್ಲಿ ಮತ್ತೊಮ್ಮೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರೈತರಿಗೆ ನೆರವು ನೀಡದೇ ಕಾರ್ಪೊರೇಟ್ ಗಳಿಗೆ ಏಕೆ
ಬೆಂಗಳೂರು: ರೈತರ ಸಾಲ ಮನ್ನಾ ವಿಷಯದಲ್ಲಿ ಮತ್ತೊಮ್ಮೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನು ಟಾರ್ಗೆಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರೈತರಿಗೆ ನೆರವು ನೀಡದೇ ಕಾರ್ಪೊರೇಟ್ ಗಳಿಗೆ ಏಕೆ ನೆರವು ನೀಡುತ್ತಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ, ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮ ಬಳಿ ನೋಟು ಮುದ್ರಿಸುವ ಯಂತ್ರ ಇಲ್ಲ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಬದಲು ಕಾರ್ಪೊರೇಟ್ ಗಳಿಗೆ ಏಕೆ ಸಹಾಯ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ವಿಜಯೇಂದ್ರ ಸ್ಪರ್ಧೆ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಅಥವಾ ನನ್ನ ವಿರುದ್ಧ ಯಡಿಯೂರಪ್ಪ ಅಥವಾ ಅವರ ಮಗ ಸ್ಪರ್ಧಿಸಲು ವರುಣಾ ಕ್ಷೇತ್ರಕ್ಕೆ ನನ್ನ ಕೊಡುಗೆ ಬಗ್ಗೆ ಕ್ಷೇತ್ರದ ಜನತೆಗೆ ತಿಳಿದಿದೆ ಎಂದಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ