ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ವಿನಾಕಾರಣ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಬಿತ್ತರಿಸಲಾಗುತ್ತಿದೆ. ಟಿಕೆಟ್ ಪಡೆಯುವಲ್ಲಿ ಸಿದ್ಧರಾಮಯ್ಯ ಮೇಲುಗೈ. ಮೌನಕ್ಕೆ ಶರಣಾದ ಖರ್ಗೆ ಎಂಬಿತ್ಯಾದಿಯಾಗಿ ಸುದ್ದಿ ಮಾಡಲಾಗುತ್ತಿದೆ. ಎಲ್ಲವೂ ಅವರವರ ಕಲ್ಪನೆಗೆ ಅನುಗುಣವಾಗಿ ಬಿಂಬಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.