ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಅವರ ಪುತ್ರ ಡಾ. ಯತೀಂದ್ರ ವರುಣಾದಿಂದ ಕಣಕ್ಕಿಳಿಯುತ್ತಿದ್ದಾರೆ, ತಮ್ಮ ಹಿರಿಯ ಪುತ್ರ ರಾಕೇಶ್ ನಿಧನದ ನಂತರ ಸಿಎಂ ತಮ್ಮ ಎರಡನೇ ಪುತ್ರ ಯತೀಂದ್ರ ಅವರನ್ನು ರಾಜಕೀಯದ ಮುಖ್ಯವಾಹಿನಿಗೆ ಕರೆ ತಂದಿದ್ದಾರೆ. ವೈದ್ಯನಾಗಿದ್ದ ಯತೀಂದ್ರ ಪೂರ್ಣ ಪ್ರಮಾಣದ ರಾಜಕೀಯದಲ್ಲಿ ತೊಡಗಿದ್ದಾರೆ.ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ವಿರುದ್ದ ಯತೀಂದ್ರ ಸ್ಪರ್ದಿಸಲಿದ್ದಾರೆ.