ಪಕ್ಷ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಶಿಕುಮಾರ್, ಕಾಂಗ್ರೆಸ್ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೆಚ್ಚಾಗುತ್ತಿದೆ. ಅರ್ಹರಿಗೆ ಟಿಕೆಟ್ ನೀಡದೆ, ನಂಬಿಸಿ ಕತ್ತು ಕೊಯ್ಯುವ ಕೆಲಸ ನಡೆಯುತ್ತಿದೆ. ಯಾವುದೇ ಪಕ್ಷ ಈ ರೀತಿ ಮಾಡಬಾರದು. ನನ್ನ ಕ್ಷೇತ್ರದ ಜನ ಜೆಡಿಎಸ್ನಿಂದ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಹೇಳುತ್ತಿದ್ದಾರೆ. ಜನರ ಒತ್ತಡಕ್ಕೆ ಮಣಿದು ಮತ್ತು ಪಕ್ಷದ ವರ್ತನೆಯಿಂದ ಬೇಸತ್ತು ಜೆಡಿಎಸ್ ಸೇರ್ಪಡೆಗೊಂಡಿದ್ದೇನೆ. ಈ ಸಂಬಂಧ ಜೆಡಿಎಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದರು.