ಇದೇ ವೇಳೆ ಕಾಂಗ್ರೆಸ್ ನಿಂದ ಮುಸ್ಲಿಂ ಸಮುದಾಯದ 26 ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕೆಂಬ ಒತಡವೂ ಇದ್ದು, ಇದಕ್ಕೆ ಕಾಂಗ್ರೆಸ್ ನಾಯಕ ಎ ರೆಹಮಾನ್ ಖಾನ್ ಸಹ ಒತ್ತಡ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಮುಸ್ಲಿಂ ಸಮುದಾಯದ ಬೇಡಿಕೆಯನ್ನು ತಳ್ಳಿಹಾಕಿದ್ದು, ಮುಸ್ಲಿಂ ಅಭ್ಯರ್ಥಿಗಳು ಗೆಲ್ಲುವ ಪ್ರದೇಶಗಳನ್ನು ಸಮೀಕ್ಷೆ ಮೂಲಕ ತಿಳಿದುಕೊಳ್ಳಲಾಗಿದ್ದು, ಟಿಕೆಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ.