ಬೆಂಗಳೂರು: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಬಿಜೆಪಿಯ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆಯಾಗಿದ್ದು, ಕೃಷ್ಣರಾಜ, ವಿರಾಜಪೇಟೆ ಸೇರಿದಂತೆ ಕುತೂಹಲ ಮೂಡಿಸಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ.
The 3rd list of candidates for the upcoming assembly elections is here.
ನಿರೀಕ್ಷೆಯಂತೆಯೇ ಹರಪನಹಳ್ಳಿಯಿಂದ ಮಾಜಿ ಸಚಿವ, ರೆಡ್ಡಿ ಸಹೋದರ, ಕರುಣಾಕರ ರೆಡ್ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಎಸ್ಎ ರಾಮ್ ದಾಸ್, ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಬೋಪಯ್ಯ ಅವರಿಗೆ ಟಿಕೆಟ್ ನೀಡಲಾಗಿದ್ದು ಒಟ್ಟು 59 ಮಂದಿಗೆ ಬಿಜೆಪಿ ಟಿಕೆಟ್ ನೀಡಿದೆ.