ಆದರೆ ಹ್ಯಾರಿಸ್ ಗೆ ಟಿಕೆಟ್ ನೀಡುವುದರ ಬಗ್ಗೆ ಹಲವು ಕಾಂಗ್ರೆಸ್ ಮುಖಂಡರು ತೀವ್ರ ಆಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪ್ರಕರಣ ಇತ್ತೀಚೆಗೆ ನಡೆದಿದೆ, ಅದನ್ನು ಮಾಧ್ಯಮಗಳಲ್ಲಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟವಾಗಿದೆ, ಈ ಪ್ರಕರಣ ಇನ್ನೂ ಸಾರ್ವಜನಿಕರ ಮನಸಲ್ಲಿ ಉಳಿದಿದೆ, ಯಾರನ್ನಾದರೂ ಜೈಲಿಗೆ ಕಳುಹಿಸುವುದು ಆಡಳಿತಾರೂಡ ಸರ್ಕಾರದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ, ಆದರೆ ಈ ಪ್ರಕರಣವನ್ನು ವಿರೋಧ ಪಕ್ಷಗದಳು ಪ್ರಚಾರ ಸಮಯದಲ್ಲಿ ಸದುಪಯೋಗ ಪಡಿಸಿಕೊಳ್ಳುತ್ತವೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ.