ಶಿರಾ: ಸ್ಪರ್ಧೆಯಿಂದ ಹಿಂದೆ ಸರಿದ ಬಿಜೆಪಿ ಕುರುಬ ಸುಮುದಾಯದ ಅಭ್ಯರ್ಥಿ!

ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಕೆ.ಮಂಜುನಾಥ್‌ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ....
ಬಿ.ಕೆ ಮಂಜುನಾಥ್
ಬಿ.ಕೆ ಮಂಜುನಾಥ್
ತುಮಕೂರು:  ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಕೆ.ಮಂಜುನಾಥ್‌ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ತಾವು ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯ ನಾಯಕರು ನನ್ನನ್ನು ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಅಲ್ಲದೆ, ಏ.18 ರಂದು ಬಿ ಫಾರಂ ತೆಗೆದುಕೊಂಡು ಹೋಗುವಂತೆ ಕಚೇರಿಯಿಂದ ಮಾಹಿತಿಯೂ ಬಂದಿತ್ತು. ಆದರೆ ನನ್ನ ಕುಟುಂಬದವರ ಜೊತೆ ಚರ್ಚಿಸಿದ ನಂತರ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
20134ರ ವಿಧಾನಸಭೆ ಚುನಾವಣೆಯಲ್ಲಿ ಟಿ,ಬಿ ಜಯಚಂದ್ರ ವಿರುದ್ಧ ಸ್ಪರ್ಧಿಸಿ 25 ಸಾವಿರ ಮತ ಪಡೆದಿದ್ದರು.  ಗೊಲ್ಲ ಸಮುದಾಯದ ಮುಖಂಡ ಸಿಎಂ ನಾಗರಾಜ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆಯಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com