ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯ ನಾಯಕರು ನನ್ನನ್ನು ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿ ಎಂದು ಘೋಷಿಸಿದ್ದರು. ಅಲ್ಲದೆ, ಏ.18 ರಂದು ಬಿ ಫಾರಂ ತೆಗೆದುಕೊಂಡು ಹೋಗುವಂತೆ ಕಚೇರಿಯಿಂದ ಮಾಹಿತಿಯೂ ಬಂದಿತ್ತು. ಆದರೆ ನನ್ನ ಕುಟುಂಬದವರ ಜೊತೆ ಚರ್ಚಿಸಿದ ನಂತರ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.