ಹಾಸನ: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಾವು ಹೆಚ್ಚಾಗಿದ್ದು, ಪ್ರತಿಪಕ್ಷಗಳ ವಿರುದ್ದ ಪಕ್ಷಗಳು ಪ್ರತಿತಂತ್ರಗಳನ್ನು ರೂಪಿಸುತ್ತಿರುವ ನಡುವಲ್ಲೇ ಆಂತರಿಕ ರಾಜಕೀಯಕ್ಕೆ ಮುಂದಾಗಿರುವ ಬಿಜೆಪಿ, ಜೆಡಿಎಸ್'ಗೆ ಲಾಭ ಮಾಡುವ ಸಲುವಾಗಿ ಹಾಸನ, ಸಕಲೇಶಪುರ ಹಾಗೂ ಬೇಲೂರು ವಿಧಾನಸಭಾ ಕ್ಷೇತ್ರಗಳಲ್ಲಿ ದುರ್ಬಲ ಅಭ್ಯರ್ಥಿಗಳನ್ನು ನಿಲ್ಲಿಸಲು ಚಿಂತನೆಗಳನ್ನು ನಡೆಸುತ್ತಿದೆ ಎಂದು ತಿಳಿದುಬಂದಿದೆ.