ಅಂಬರೀಶ್ ಸ್ಪರ್ಧೆ ಮಾಡದಿದ್ದರೆ ತಮಗೇ ಟಿಕೆಟ್ ಕೊಡಿ ಎಂದು ಅಮರಾವತಿ ಚಂದ್ರಶೇಖರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿ, ಅಂಬರೀಶ್ ತಮಗೆ ಅವಕಾಶ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು. ಇದರಿಂದ ಆಕ್ರೋಶಗೊಂಡಿರುವ ಅಂಬರೀಶ್ ತಾವು ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿಲ್ಲ ಎಂದು ಖಾರವಾಗಿ ಹೇಳಿದ್ದಾರೆ.