ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಕ್ಷಮದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದ ನಾಯಕರು ಭಾರತೀಯ ಜನತಾ ಪಕ್ಷದ ಸಿದ್ದಾಂತ, ನೀತಿಗಳ ಕುರಿತು ಟೀಕಿಸಿದ್ದಾರೆ. "ಹಿಂದುಳಿದ ವರ್ಗಕ್ಕೆ ಬಿಜೆಪಿ ಯಾವ ಅನುಕೂಲಗಳನ್ನೂ ಕಲ್ಪಿಸಲಿಲ್ಲ. ಯಡಿಯೂರಪ್ಪ, ಈಶ್ವರಪ್ಪ ಇಬ್ಬರೂ ನನ್ನನ್ನು ಕೈಬಿಟ್ಟಿದ್ದಾರೆ. ನನ್ನ ನಿರೀಕ್ಷೆ ಹುಸಿಯಾಗಿದೆ ಹೀಗಾಗಿ ನಾನು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ" ವಿರೂಪಾಕ್ಷಪ್ಪ ಹೇಳಿದ್ದಾರೆ.