ಬಂಡಾಯ ಶಾಸಕರ ಕೇಸ್; ಮೇ 7ರೊಳಗೆ ತೀರ್ಮಾನ ತೆಗೆದುಕೊಳ್ಳಲು ಹೈಕೋರ್ಟ್ ಆದೇಶ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ವಿಧಾನಸಭೆ ವಿಸರ್ಜನೆಯಾಗಲಿರುವುದರಿಂದ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರು ಸಲ್ಲಿಸಿರುವ ಪ್ರಾತಿನಿಧ್ಯ ಕುರಿತು ಮೇ 7 ಅಥವಾ ಅದರೊಳಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ವಿಧಾನಸಭೆ ಸ್ಪೀಕರ್ ಗೆ ಹೈಕೋರ್ಟ್ ಆದೇಶ ನೀಡಿದೆ.

ವಿಪ್ ಉಲ್ಲಂಘನೆ ಮಾಡಿದ್ದಕ್ಕಾಗಿ ಜೆಡಿಎಸ್ ನ ಇಬ್ಬರು ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಅರ್ಜಿ ಕುರಿತು ವಿಧಾನಸಭಾಧ್ಯಕ್ಷರು ತೀರ್ಮಾನ ತೆಗೆದುಕೊಳ್ಳಬೇಕೆಂದು ನ್ಯಾಯಮೂರ್ತಿ ರಾಘವೇಂದ್ರ ಎಸ್ ಚೌಹಾನ್ ತೀರ್ಪು ನೀಡಿದ್ದಾರೆ.

ಜೆಡಿಎಸ್ ನ ಬಂಡಾಯ ಶಾಸಕರಾದ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಸಿ.ಎನ್.ಬಾಲಕೃಷ್ಣ ಹಾಗೂ ಮೂಡಿಗೆರೆ ಕ್ಷೇತ್ರದ ಬಿ.ಬಿ.ನಿಂಗಯ್ಯ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com