ಅಂಬರೀಶ್ ಜೆಡಿಎಸ್ ಸೇರುವುದಾದರೆ ಅವರಿಗೆ ಸ್ವಾಗತ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಸಚಿವ, ನಟ ಅಂಬರೀಶ್ ಜೆಡಿಎಸ್ ಗೆ ಬರುವುದೆಂದಾದರೆ ಅವರಿಗೆ ಆತ್ಮೀಯ ಸ್ವಾಗತವಿದೆ" ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ.ಮಾರಸ್ವಾಮಿ,
ಎಚ್.ಡಿ.ಮಾರಸ್ವಾಮಿ,
Updated on
ಮಂಡ್ಯ: "ಮಾಜಿ ಸಚಿವ, ನಟ ಅಂಬರೀಶ್ ಜೆಡಿಎಸ್ ಗೆ ಬರುವುದೆಂದಾದರೆ ಅವರಿಗೆ ಆತ್ಮೀಯ ಸ್ವಾಗತವಿದೆ" ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಡನೆ ಮಾತನಾಡಿದ್ದ ಕುಮಾರಸ್ವಾಮಿ "ಅಂಬರಿಶ್ ಗೆ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಚೆ ಇದ್ದಲ್ಲಿ ನಾವು ಅವರನ್ನು ಸ್ವಾಗತಿಸಲು ಸಿದ್ದರಿದೇವೆ. ಅಗತ್ಯವಾದಲ್ಲಿ ಅವರ ಮನೆಗೆ ತೆರಳಿ ಭೇಟಿಯಾಗುತ್ತೇನೆ." ಎಂದರು.
"ಅಂಬರೀಶ್ ತಾವೆಲ್ಲಿಯೂ ಜೆಡಿಎಸ್ ಸೇರ್ಪಡೆಯಾಗುತ್ತೇನೆಂದು ಹೇಳಿಲ್ಲ. ಆರೋಗ್ಯ ಸಮಸ್ಯೆ ಇರುವ ಕಾರಣ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಅವರು ದೇವೇಗೌಡರ ಬಗ್ಗೆ ಒಳ್ಳೆಯ ಅಭಿಪ್ರಾಯ ಹೊಂದದ್ದಾರೆ"
ಅಂಬರೀಶ್ ಪಕ್ಷ ಸೇರ್ಪಡೆಗೆ ಆಸಕ್ತರಾಗಿದ್ದರೆ ಅವರಿಗೆ ಸ್ವಾಗತವಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕಲ್ಪನಾ ಸಿದ್ದರಾಜು ಅವರೊಡನೆ ಮಾತುಕತೆಗಾಗಿ ಮದ್ದೂರಿಗೆ ಆಗಮಿಸಿದ್ದ ಕುಮಾರಸ್ವಾಮಿ ಮಾದ್ಯಮದವರೊಂದಿಗೆ ಮಾತನಾಡಿದ್ದಾರೆ.
ಕಲ್ಪನಾ ಸಿದ್ದರಾಜು ಕೆಲ ಸಮಯದಿಂದ ಪಕ್ಷ  ಚಟುವಟಿಕೆಗಳಿಂದ ದೂರವಿದ್ದರು. ಆದರೆ ಈಗ ಮತ್ತೆ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದಾರೆ. ಭವಿಷ್ಯದಲ್ಲಿ ಅವರಿಗೆ ಪಕ್ಷ ಉತ್ತಮ ಸ್ಥಾನ ಮಾನವನ್ನು ನಿಡಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com