ನಿನ್ನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ಮಾಡುವ ವೇಳೆ ಮರಿಸ್ವಾಮಿ ಅವರನ್ನು ಪಕ್ಷದ ಪರವಾಗಿ ಮತಯಾಚನೆಗೆ ಬರಲು ಸಿದ್ಧರಾಮಯ್ಯ ಮನವಿ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ್ದ ಮರಿಸ್ವಾಮಿ, ಜೆಡಿಎಸ್ ಬೆಂಬಲಿಸುವುದಾಗಿ ಹೇಳಿದ್ದರು. ಬಳಿಕ ಇಬ್ಬರ ನಡುವೆ ಕೆಲ ಕ್ಷಣಮಾತಿಗೆ ಮಾತು ಬೆಳೆದು ನೆರೆದಿದ್ದವರನ್ನು ನಗೆಗಡಲಲ್ಲಿ ತೇಲಿಸಿತು. ಮಾತಿನ ಚಕಮಕಿಯ ವಿಡಿಯೋ ತುಣುಕು, ಸಾಮಾಜಿಕ ತಾಣಗಳಾದ ವಾಟ್ಸಾಪ್, ಫೇಸ್ಬುಕ್ಗಳಲ್ಲಿ ಹರಿದಾಡುತ್ತಿವೆ.