ಕೆಜಿಎಫ್ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ನಾಮಪತ್ರ ಪರಿಶೀಲನೆಗೆ ತಡೆ

ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ಮತ್ತು ಕೆಜಿಎಫ್ ವಿಧಾನಸಭಾ ಕ್ಷೇತ್ರದ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಲಾರ: ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಅವರ ಪುತ್ರಿ ಮತ್ತು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೂಪಕಲಾ ಅವರ ನಾಮಪತ್ರ ಪರಿಶೀಲನೆಯನ್ನು ಮುಂದೂಡಲಾಗಿದೆ. ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಆಕ್ಷೇಪಣೆ ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ಕಾರ್ಯವನ್ನು ಮುಂದೂಡಲಾಯಿತು.

ಚುನಾವಣಾಧಿಕಾರಿ ನಾಮಪತ್ರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಭಕ್ತವತ್ಸಲಂ, ರೂಪಕಲಾ ಅವರ ಹೆಸರು ತುಮಕೂರು ಮತ್ತು ಕೆಜಿಎಫ್ ನ ಬೆತ್ತಮಂಗಳ ಕ್ಷೇತ್ರಗಳಲ್ಲಿ ಕಂಡುಬರುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ರೂಪಕಲಾ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಒತ್ತಾಯಿಸಿದ್ದರು.

ಅಪರಾಧ ಕೇಸುಗಳ ಕಾಲಂನ್ನು ಭರ್ತಿ ಮಾಡದ್ದಕ್ಕಾಗಿ ರೂಪಕಲಾ ಅವರ ನಾಮಪತ್ರವನ್ನು ತಿರಸ್ಕರಿಸುವಂತೆ ಬಿಜೆಪಿ ಅಭ್ಯರ್ಥಿ ಅಶ್ವಿನಿ ಅವರು ಕೂಡ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com