ಟ್ವಿಟರ್ ನಲ್ಲಿ ರೆಡ್ಡಿ ಸಹೋದರರು ಮತ್ತು ಬಿಜೆಪಿ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ರಾಹುಲ್ ಗಾಂಧಿ, ರೆಡ್ಡಿ ಸಹೋದರರು ಮತ್ತು ಬಿಎಸ್ ಯಡಿಯೂರಪ್ಪ ಗಣಿ ಸಂಪತ್ತನ್ನು ಲೂಟಿ ಮಾಡಿದರು. ನಮ್ಮ ಸರ್ಕಾರ ಅವರನ್ನು ಜೈಲಿಗಟ್ಟಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಅವರನ್ನು ಜೈಲಿನಿಂದ ಹೊರಗೆ ತರುವ ಪ್ರಯತ್ನ ಮಾಡಿದೆ. ಅಲ್ಲದೆ ಅವರ ಪೈಕಿ 8 ಮಂದಿಗೆ ಟಿಕಟ್ ಕೂಡ ಕರ್ನಾಟಕ ವಿಧಾನಸಭೆಗೆ ಕಳುಹಿಸಲು ಪ್ರಯತ್ನಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ನಡೆ ಪ್ರಾಮಾಣಿಕ ಪ್ರಜೆಗೆ ಮಾಡುತ್ತಿರುವ ಅಪಮಾನವಾಗಿದ್ದು, ಬಸವಣ್ಣನವರ ತತ್ಪಾದರ್ಶಗಳಿಗೆ ತೋರುತ್ತಿರುವ ಅಗೌರವವಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.