ಕಾಂಗ್ರೆಸ್ ಸರ್ಕಾರದ​ ವಿರುದ್ಧ ಚಾರ್ಜ್ ಶೀಟ್​ ಬಿಡುಗಡೆ ಮಾಡಿದ ಜೆಡಿಎಸ್

ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ 15 ಅಂಶಗಳ ಚಾರ್ಜ್​ ಶೀಟ್(ಆರೋಪ ಪಟ್ಟಿ) ಅನ್ನು ಭಾನುವಾರ ಬಿಡುಗಡೆ...
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 15 ಅಂಶಗಳ ಚಾರ್ಜ್​ ಶೀಟ್(ಆರೋಪ ಪಟ್ಟಿ) ಅನ್ನು ಭಾನುವಾರ ಬಿಡುಗಡೆ ಮಾಡಿದೆ.
ಈ ಸಂಬಂಧ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ಅವರು ಇಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಗೆ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.
ಏನಿದೆ ಆರೋಪ ಪಟ್ಟಿಯಲ್ಲಿ?
  • ಲಿಂಗಾಯತ ವೀರಶೈವ ಸಮುದಾಯವನ್ನು ಒಡೆದಿದ್ದು ಜಾತ್ಯತೀತತೆ ತತ್ವದ ಆಧಾರದ ಮೇಲಾ?
  • ಸಮುದಾಯ, ಧರ್ಮಗಳನ್ನು ಒಡೆಯುವುದು, ಓಲೈಸುವುದೇ ಕಾಂಗ್ರೆಸ್​ನ ಜಾತ್ಯತೀತತೆಯೇ?
  • ಜ್ಯಾತ್ಯತೀತ ತತ್ವದ ಪ್ರತಿಪಾದಕರಿಗೆ ಕಾಂಗ್ರೆಸ್​ ಸರ್ಕಾರ ಕೊಟ್ಟ ರಕ್ಷಣೆ ಎಂಥದ್ದು? ಸಂಶೋಧಕ ಎಂ.ಎಂ. ಕಲಬುರಗಿ, ಗೌರಿ ಲಂಕೇಶ್​ ಹತ್ಯೆ ಪ್ರಕರಣದ ತನಿಖೆ ಎಲ್ಲಿವರೆಗೆ ಬಂದಿದೆ?
  • ಸತ್ಯದ ಮೇಲೆ ಪ್ರಮಾಣವಚನ ಸ್ವೀಕಾರ ಮಾಡಿದವರು ಸತ್ಯದ ಕೆಲಸ ಮಾಡಿದರೇ? ನ್ಯಾಯ, ಸತ್ಯದ ಪ್ರತೀಕವಾದ ಲೋಕಾಯುಕ್ತ ಸಂಸ್ಥೆಯನ್ನು ಕಾಂಗ್ರೆಸ್​ ದುರ್ಬಲಗೊಳಿಸಿದೆ.
  • 70 ಲಕ್ಷ ರೂಪಾಯಿಯಗಳ ಹ್ಯೂಬ್ಲೋಟ್​ ಕೈಗಡಿಯಾರವನ್ನು ಸಿದ್ದರಾಮಯ್ಯ ಖರೀದಿಸಿ ತೊಟ್ಟಿದ್ದೋ? ಕಿಕ್ ಬ್ಯಾಕ್​ನಿಂದ ಬಂದ ಕೊಡುಗೆಯೋ?
  • ತುರ್ತು ಪರಿಸ್ಥಿತಿ ಹೇರುವ ಮೂಲಕ ಕಾಂಗ್ರೆಸ್​ ಸಂವಿಧಾನವನ್ನು ಅಗೌರವಿಸಿದೆ. ಸಂವಿಧಾನಕ್ಕೆ ರಾಹುಲ್​ ಗಾಂಧಿ ಅವರ ಕುಟುಂಬ ಅಪಚಾರ ಮಾಡಿದೆ. ಜೆಡಿಎಸ್​ನ ಬಂಡಾಯ ಶಾಸಕರನ್ನು ರಕ್ಷಿಸಿಕೊಳ್ಳಲು ಸ್ಪೀಕರ್​ ಕಚೇರಿ ದುರ್ಬಳಕೆ ಮಾಡಿಕೊಂಡಿದ್ದು ಅಸಾಂವಿಧಾನಿಕ.
  • ಕಾಂಗ್ರೆಸ್​ ಮಗ್ಗುಲಲ್ಲೇ ಅತ್ಯಾಚಾರಿಗಳಿದ್ದಾರೆ. ಕಾಂಗ್ರೆಸ್​ ಉಸ್ತುವಾರಿ ಕೆ.ಸಿ ವೇಣುಗೋಪಾಲ್​ ಮೇಲಿರುವ ಅತ್ಯಾಚಾರ ಪ್ರಕರಣ ಮತ್ತು ಎಚ್​.ವೈ ಮೇಟಿ ಅವರ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಕಾಂಗ್ರೆಸ್​ ಮರೆತಿದೆ.
  • ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ಕಾಂಗ್ರೆಸ್​ ಸರ್ಕಾರ ಹಣ ಬಿಡುಗಡೆ ಮಾಡದೆ ರೈತರನ್ನು ​ ವಂಚಿಸಿದೆ.
  • ಬೃಹತ್ ಹಗರಣಗಳಿಗೆ ಸ್ಟೀಲ್ ಬ್ರಿಡ್ಜ್ ಯೋಜನೆ ಒಂದು ಉದಾಹರಣೆ
  • ಕಾಂಗ್ರೆಸ್​ ಪಕ್ಷದಲ್ಲೇ ಗೂಂಡಾಗಳಿದ್ದಾರೆ. ಇನ್ನು ಕಾಂಗ್ರೆಸ್​ನಿಂದ ಜನರ ರಕ್ಷಣೆ ಸಾಧ್ಯವೇ?
  • ವಿಧಾನಪರಿಷತ್​ ಸದಸ್ಯ ಗೋವಿಂದರಾಜು ತಮ್ಮ ಡೈರಿಯಲ್ಲಿ ಬರೆದಿದ್ದ ಹೈಕಮಾಂಡ್​ ಕಪ್ಪದ ಕತೆ ಏನಾಯ್ತು?
  • ಮಹದಾಯಿ ವಿವಾದದಲ್ಲಿ ಬಗೆಹರಿಯದೇ ಹೋಗಿದ್ದರಲ್ಲಿ ಕಾಂಗ್ರೆಸ್ ಪಕ್ಷ ಎ1 ಆರೋಪಿ
  • ಎಲ್ಲ ಸಮುದಾಯದ ದೊಡ್ಡ ನಾಯಕರನ್ನೇ ಮೂಲೆಗೆ ಸರಿಸಿ, ಅವರು ಪ್ರತಿನಿಧಿಸುವ ಸಮುದಾಯಕ್ಕೆ ದ್ರೋಹ ಬಗೆದಿದ್ದು ಕಾಂಗ್ರೆಸ್​.
  • ದಲಿತರ ದೌರ್ಜನ್ಯ ತಡೆ ಕಾಯಿದೆ ದುರ್ಬಲಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್​ ಆದೇಶಿಸಿದಾಗ ದೇಶದಲ್ಲಿ ದಲಿತರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಆಕ್ರೋಶವನ್ನು ಲಾಭವಾಗಿ ಪರಿವರ್ತಿಸಿಕೊಳ್ಳಲು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಉಪವಾಸ ಮಾಡಿದರು. ಈ ಮೂಲಕ ಬಡವರ ಹಸಿವನ್ನೇ ಅಣಕಿಸಿದರು.
  •  ನಾನು ಅಮಿತ್ ಷಾ ಜತೆ ವಿಮಾನದಲ್ಲಿ ಒಟ್ಟಿಗೇ ಪ್ರಾಣಿಸಿದ ಫೋಟೊ ನಿಮ್ಮ ಬಳಿ ಇದೆಯೇ ಸಿದ್ದರಾಮಯ್ಯ ನವರೇ? ನಿಮಗೆ ನೆನಪಿನ‌ಶಕ್ತಿ ಕಡಿಮೆ ಎನಿಸುತ್ತದೆ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ, ಉಪಚುನಾವಣೆಗಳು ನಡೆಯುವ ಸಂದರ್ಭದಲ್ಲೇ ನೀವು ಅಂದಿನ ಬಿಜೆಪಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಹೆಲಿಕಾಪ್ಟರ್​ನಲ್ಲಿ ಪ್ರಯಾಣಿಸಿದ್ದನ್ನು ಇಡೀ ಕರ್ನಾಟಕ ನೋಡಿದೆ. ನೆನಪಾಯ್ತೇ?

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com