ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರಿಗೆ ಮನವಿ ಸಲ್ಲಿಸಿರುವ ಅವರು, ಮೇ.12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಜಗ್ಗೇಶ್ ಅವರು ಸ್ಫರ್ಧೆ ನಡೆಸುತ್ತಿದ್ದಾರೆ. ಜಗ್ಗೇಶ್ ಅವರು ನಟರಾಗಿದ್ದು, ಖಾಸಗಿ ಚಾನೆಲ್ ಗಳು ಹಾಗೂ ಕೇಬಲ್ ನೆಟ್ ವರ್ಕ್ ಗಳು ಅವರ ಸಿನಿಮಾ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ. ಇದು ನೀತಿ ಸಂಹಿತೆ ಉಲ್ಲಂಘನೆ ಮಾಡಿದಂತಾಗುತ್ತದೆ.