ಪ್ರತೀಯೊಂದಕ್ಕೂ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರವನ್ನೇ ದೂಷಿಸುತ್ತದೆ. ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತು ಕೈಗಾರಿಕಾ ವಲಯದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದರೂ, ರಾಜ್ಯ ಸರ್ಕಾರ ನಿರ್ಲಕ್ಷ್ಯದಿಂದಾಗಿ ತೀವ್ರಗತಿಯ ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಕರ್ನಾಟಕ ವಿಫಲವಾಗಿದೆ. ಇದಕ್ಕೆ ಸಿದ್ದರಾಮಯ್ಯ ಸರ್ಕಾರ ಕೆಟ್ಟ ಆಡಳಿತ ಮತ್ತು ಆಡಳಿತದ ಲೋಪವೇ ಕಾರಣ ಎಂದು ಕಿಡಿಕಾರಿದ್ದಾರೆ.