ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಸಿದ್ದಫಡಿಸಲಾಗಿದ್ದ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಸಂಬಂಧ ವಾಕ್ಯ ರಚನೆಗಳು ಹಾಗೂ ವಿಪರೀಕ ವ್ಯಾಕರಣ ದೋಷಗಳು ಕಂಡು ಬಂದಿದ್ದು, ಪ್ರಣಾಳಿಕೆಗೆ ವಿರೋಧ ಪಕ್ಷಗಳು ಟೀಕೆಗಳನ್ನು ಮಾಡಲು ಆರಂಭಿಸಿದ್ದವು. ಇದಲ್ಲದೆ, ಬೆಳಗಾವಿಯ ಚಿಕ್ಕೋಡಿ ಹಾಗೂ ನಿಪ್ಪಾಣಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹೋಗಿದ್ದ ಸಿದ್ದರಾಮಯ್ಯ ಅವರು, ತಡವಾಗಿ ಆಗಮಿಸಿದ್ದಕ್ಕೆ ಕ್ಷಮೆ ಕೇಳಿದರು. ಆಲ್ಲದೆ, ಮಹಾರಾಷ್ಟ್ರ ಗಡಿ ಪ್ರದೇಶವಾದ ಕಾರಣ, ತಮಗೆ ಮರಾಠಿ ಭಾಷೆ ಬರುವುದಿಲ್ಲ ಎಂದು ಮತ್ತೆ ಕ್ಷಮೆಯಾಚಿಸಿದರು.