ಕಾವೇರಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ಮೇಲ್ನೋಟಕ್ಕೆ ಗೆಟ್ ಟುಗೆದರ್ ನಂತೆ ಕಾಣಿಸಿದರೂ ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಬೇರೆಯೇ ಆಗಿದೆ ಎಂದು ಮೂಲಗಳು ತಿಳಿಸಿವೆ, ಸಿದ್ದರಾಮಯ್ಯ ಆಯೋಜಿಸಿದ್ದ ಭೋಜನ ಕೂಟದಲ್ಲಿ 16 ಸಚಿವರು ಪಾಲ್ಗೊಂಡಿದ್ದರು, ಈ ವೇಳೆ ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರದ ಬಗ್ಗೆ ಎಲ್ಲರಿಂದಲೂ ಫೀಡ್ ಬ್ಯಾಕ್ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಎಲ್ಲಾ ಇಲಾಖೆಗಳು ಯಾವುದೇ ಅಡೆತಡೆಯಿಲ್ಲದೇ ಸುಲಭವಾಗಿ ನಡೆದುಕೊಂಡು ಹೋಗುತ್ತಿವೆಯೇ ಎಂಬ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.