ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ- ಉಪಮುಖ್ಯಮಂತ್ರಿ ಜಿ. ಪರಮೇಶ್ವರ್
ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರು: ಜೆಡಿಎಸ್- ಕಾಂಗ್ರೆಸ್ ಮೈತ್ರಿ ವಿಧಾನಸೌಧಕ್ಕೆ ಮಾತ್ರ ಸೀಮಿತವಾಗಿದ್ದು, ನಗರ ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವಿಗಾಗಿ ಕಾಂಗ್ರೆಸ್ ಸ್ವಂತ ಶಕ್ತಿಯಿಂದ ಹೋರಾಟ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಹಿಂದಿನ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಮೈತ್ರಿ ಸರ್ಕಾರದಲ್ಲೂ ಮುಂದುವರೆಸಲಾಗಿದೆ. ಮೈತ್ರಿ ಸರ್ಕಾರ ಮುನ್ನಡೆಸುವುದು ಕಷ್ಟಸಾಧ್ಯವಾಗಿದೆ. ಆದಾಗ್ಯೂ ಉಭಯ ಪಕ್ಷಗಳು ರಾಜ್ಯದ ಜನರ ಕಲ್ಯಾಣಕ್ಕೆ ವಿಧೇಯರಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದರು.