ವಿಧಾನಸಭೆ ಚುನಾವಣೆ ನಡೆದು ಮೂರು ತಿಂಗಳು ಕಳೆದರೂ ಬಿಜೆಪಿ ಇನ್ನೂ ಕಾಂಗ್ರೆಸ್ ಶಾಸಕರ ಓಲೈಕೆಯಲ್ಲಿ ತೊಡಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ, ಆದರೆ ನಾವು ಶಾಸಕರನ್ನು ಓಲೈಸುವ ಅಗತ್ಯವಿಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರೇ ಸರ್ಕಾರ ಬೀಳಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಘೋಷಿಸಿದ್ದಾರೆ.