ಮಹದಾಯಿ ನ್ಯಾಯಾಧಿಕರಣದ ತೀರ್ಪು ಸ್ವಾಗತಾರ್ಹ: ಯಡಿಯೂರಪ್ಪ

ಮಹದಾಯಿ ನ್ಯಾಯಾಧಿಕರಣದ ತೀರ್ಪುನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದು, ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಹುಬ್ಬಳ್ಳಿ: ಮಹದಾಯಿ ನ್ಯಾಯಾಧಿಕರಣದ ತೀರ್ಪುನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಸ್ವಾಗತಿಸಿದ್ದು, ನ್ಯಾಯಾಧಿಕರಣದ ತೀರ್ಪು ಸಮಾಧಾನ ತಂದಿದೆ ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಮಹದಾಯಿ ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ, ಇದು ರೈತರಿಗೆ ಸಿಕ್ಕ ಜಯ, ರೈತರಿಗೆ ನ್ಯಾಯ ಸಿಕ್ಕಿದೆ. ಹೆಚ್ಚಿನ ನೀರಿಗಾಗಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಮೋಹನ ಕಾತರಕಿ ಹೇಳಿದ್ದಾರೆ ಎಂದರು.
ಕರ್ನಾಟಕಕ್ಕೆ ನೀರು ಕೊಡುವ ಕುರಿತಾಗಿ ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಅವರು ಬರೆದ ಪತ್ರಕ್ಕೆ ಕಾಂಗ್ರೆಸ್ ನವರು ವ್ಯಾಪಕ ಟೀಕೆ ಮಾಡಿದ್ದರು. ಈಗ ಅವರಿಗೆ ತಕ್ಕ ಉತ್ತರ ಸಿಕ್ಕಿದೆ ಎಂದು ತಿರುಗೇಟು ನೀಡಿದರು. 
ರಾಜ್ಯ ಸರ್ಕಾರ ಕಳಸಾ, ಬಂಡೂರಿ ಯೋಜನೆ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ರೈತರ ಮೇಲಿನ ಎಲ್ಲ ಪ್ರಕರಣ ಹಿಂಪಡೆಯಬೇಕು ಎಂದು ಮಾಜಿ ಸಿಎಂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com