ರೇವಣ್ಣ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿರುವ ಸಂತ್ರಸ್ತರಿಗೆ ಬಿಸ್ಕೆಟ್ ಎಸೆಯುತ್ತಿದ್ದ ದೃಶ್ಯವಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಮನೆ ಕಳೆದುಕೊಂಡು ಬೀದಿಗೆ ಬಂದವರ ಜೊತೆಗೆ ಸಚಿವರು ಈ ರೀತಿ ವರ್ತಿಸಿದ್ದು ಅಕ್ಷ್ಯಮ್ಯ, ಅಮಾನವೀಯ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾವಿರಾರು ಮಂದಿ ಆಕ್ರೋಶ ಹೊರಹಾಕುತ್ತಿದ್ದಾರೆ.