ಹಿಂದಿನ ಸರ್ಕಾರದ ಬಹುತೇಕ ಯೋಜನೆಗಳು ರದ್ದು: ರಾಯರೆಡ್ಡಿ ಆರೋಪ ನಿರಾಕರಿಸಿದ ಜಿ.ಟಿ. ದೇವೇಗೌಡ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ನಿರಾಕರಿಸಿದ್ದಾರೆ.
ಬೆಂಗಳೂರು: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಿಂದಿನ ಸರ್ಕಾರದ ಅನೇಕ ಯೋಜನೆಗಳನ್ನು ಈಗ ಮುಂದುವರೆಸುತ್ತಿಲ್ಲ ಎಂಬ ಮಾಜಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ಆರೋಪವನ್ನು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ನಿರಾಕರಿಸಿದ್ದಾರೆ.
ಇತ್ತೀಚಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವರಾಜ ರಾಯರೆಡ್ಡಿ, ಹಿಂದಿನ ಸರ್ಕಾರದ ಬಹಳಷ್ಟು ಯೋಜನೆಗಳನ್ನು ಮುಂದುವರೆಸುತ್ತಿಲ್ಲ ಎಂದು ಆರೋಪಿಸಿದರಲ್ಲದೇ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ದೂರು ಸಲ್ಲಿಸಿದ್ದರು.
ಈ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿ.ಟಿ. ದೇವೇಗೌಡ, ಹಿಂದಿನ ಸರ್ಕಾರ ರೂಪಿಸಿದ್ದ ಕೆಲವೊಂದು ಮಸೂದೆಗಳನ್ನು ಜಾರಿಗೆ ತರಲು ಸಾಧ್ಯವಾಗಿಲ್ಲ. ಅವುಗಳನ್ನು ತಿರಸ್ಕರಿಸಿ ರಾಜ್ಯಪಾಲರು ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ.