ತಾವು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಬಯಕೆಯಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಆಸೆಗಳು. ಬಯಕೆಗಳು ಯಾವತ್ತೂ ಈಡೇರುವುದಿಲ್ಲ ಎಂದು ಹೇಳಿದ್ದಾರೆ. ವಿಜಯಾಪುರ ಜಿಲ್ಲಾ ಅಧ್ಯಕ್ಷರ ನೇಮಕ ವಿಳಂಬವಾಗುತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳು ಹೆಚ್ಚಿರುವ ಹಿನ್ನೆಲೆಯಲ್ಲಿ ನೇಮಕ ವಿಳಂಬವಾಗುತ್ತಿದೆ ಎಂದು ಹೇಳಿದ್ದಾರೆ.